Asianet Suvarna News Asianet Suvarna News

ಚಕ್ಕಾ ಜಾಮ್‌ಗೆ ಪಕ್ಕಾ ಬ್ಲೂ ಪ್ರಿಂಟ್, ತಡೆಗೋಡೆಗೆ ಹೋರಾಟಗಾರರ ನ್ಯೂ ಪ್ಲ್ಯಾನ್..!

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್‌’ಗೆ ಕರೆ ಕೊಟ್ಟಿವೆ. ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ತಡೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 
 

ಬೆಂಗಳೂರು (ಫೆ. 06): ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್‌’ಗೆ ಕರೆ ಕೊಟ್ಟಿವೆ. ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ತಡೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 

ರೈತ ಹೋರಾಟದಲ್ಲಿ ವಿದೇಶಿ ಪಿತೂರಿ ಬಟಾಬಯಲು; ತನಿಖಾ ಸಂಸ್ಥೆಗಳಿಂದ ಮಾಹಿತಿ!

ಜ.26 ರ ಗಣರಾಜ್ಯೋತ್ಸವದಂದು ರೈತರು ನಡೆಸಿದ ಟ್ರ್ಯಾಕ್ಟರ್‌ ಪರೇಡ್‌ನಲ್ಲಿ ಭಾರೀ ಹಿಂಸಾಚಾರ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತ ದೆಹಲಿ ಪೊಲೀಸ್‌ ಮುಂಜಾಗ್ರತಾ ಕ್ರಮವಾಗಿ ಈ ಬಿಗಿ ಕ್ರಮಗಳನ್ನು ಕೈಗೊಂಡಿದೆ. ದೆಹಲಿಯ ಸಂಸತ್ತು, ಇಂಡಿಯಾ ಗೇಟ್‌ನಲ್ಲಿಯೂ ಭಾರೀ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್‌ ಪಡೆಯು ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿಟ್ಟು, ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಈ ಬಾರಿ ರೈತ ಹೋರಾಟ ತಾರ್ಕಿಕ ಅಂತ್ಯ ಕಾಣಲಿದೆಯಾ..? ಅನ್ನದಾತನ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿಯುತ್ತಾ..?