ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 04): ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. ಈ ಜೇನುತುಪ್ಪದಲ್ಲಿ ಸಕ್ಕರೆ ಸಿರಪ್‌ ಮಿಶ್ರಣವಾಗಿದೆ ಎಂಬ ಆತಂಕಕಾರಿ ವಿಷಯವನ್ನು ಪರಿಸರದ ಮೇಲೆ ನಿಗಾ ಇಡುವ ‘ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್ವಿರಾನ್‌ಮೆಂಟ್‌’ (ಸಿಎಸ್‌ಇ) ಸಂಸ್ಥೆ ಸಂಶೋಧಕರು ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ವಾಷಿಂಗ್‌ ಮಷಿನ್‌ನೊಳಗೆ ಸಿಕ್ಕಾಕಿಕೊಂಡ ಲವರ್, ಬೆಕ್ಕಿನ ಪರದಾಟ ನೀವೇ ನೋಡಿ..!

ಚೀನಾದ ಟ್ರೇಡ್‌ ಪೋರ್ಟಲ್‌ಗಳು ಸಕ್ಕರೆ ಸಿರಪ್‌ ಪೂರೈಸುತ್ತವೆ. ದೇಶದ ಪ್ರಯೋಗಾಲಯಗಳಲ್ಲಿ ತಪಾಸಣೆಯಲ್ಲೂ ಪತ್ತೆಯಾಗದಂತ ಅಂಶಗಳನ್ನು ಆ ಸಿರಪ್‌ಗಳಲ್ಲಿ ಸೇರಿಸಲಾಗುತ್ತದೆ. ಈ ಕುರಿತು ಸ್ಟಿಂಗ್‌ ಆಪರೇಶನ್‌ ನಡೆಸಿದಾಗ ಅದು ದೃಢಪಟ್ಟಿದೆ ಎಂದು ಸಿಎಸ್‌ಇ ಮಹಾನಿರ್ದೇಶಕಿ ಸುನಿತಾ ನಾರಾಯಣ್‌ ಹೇಳಿದ್ದಾರೆ. ಆದರೆ ಕೊನೆಗೆ ಜರ್ಮನಿ ಪ್ರಯೋಗಾಲಯದಲ್ಲಿ 13 ಬ್ರಾಂಡ್‌ಗಳನ್ನು ತಪಾಸಣೆಗೆ ಒಳಪಡಿಸಿದಾಗ 8 ಬ್ರಾಂಡ್‌ಗಳಲ್ಲಿ ಕಲಬೆರಕೆ ಪತ್ತೆಯಾಗಿದೆ ಎಂದು ವರದಿ ಹೇಳಿದೆ. ಹಾಗಾಗಿ ಜೇನುತುಪ್ಪವನ್ನು ತಿನ್ನುವಾಗ ಇರಲಿ ಎಚ್ಚರ..!

Related Video