'ದೆಹಲಿ ಗಲಭೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ'
- ದೆಹಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲ
- ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ, ಕೇಂದ್ರದ ವಿರುದ್ಧ ದೂರು
- ರಮಾನಾಥ್ ಕೋವಿಂದ್ ಭೇಟಿಯಾದ ಸೋನಿಯಾ ಗಾಂಧಿ ನೇತೃತ್ವದ ನಿಯೋಗ
ಬೆಂಗಳೂರು (ಫೆ.27): ದೆಹಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ರಾಷ್ಟ್ರಪತಿಯವರನ್ನು ಭೇಟಿಯಾಗಿ ಕಾಂಗ್ರೆಸ್ ದೂರಿದೆ.
ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಎದ್ದು ಕಾಣ್ತಿದೆ: ಅಮೆರಿಕಾ ಕಾಂಗ್ರೆಸ್ ನಾಯಕಿ
ಪಾದಯಾತ್ರೆಯಲ್ಲಿ ರಾಷ್ಟ್ರಪತಿಭವನಕ್ಕೆ ಸಾಗಿ ರಮಾನಾಥ್ ಕೋವಿಂದ್ ಭೇಟಿಯಾದ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗದಲ್ಲಿ ಮನಮೋಹನ್ ಸಿಂಗ್ ಮತ್ತಿತರ ಹಿರಿಯ ನಾಯಕರು ಉಪಸ್ಥಿತರಿದ್ದರು.