ಕಂಗಾಲಾಗಿರುವ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ, ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಮನವಿ
- ರಾಜ್ಯಾದ್ಯಂತ ಆರಿದ್ರಾ ಮಳೆ ಆರ್ಭಟ, ಕಂಗಾಲದ ಜನ
- ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
- ಹಲವು ಸಂಚಾರ ಸ್ಥಗಿತ, ಮತ್ತೆ ಹೆಚ್ಚಿದ ಆತಂಕ
ಆರಿದ್ರಾ ಮಳೆಗೆ ಕರ್ನಾಟಕ ತತ್ತರಿಸಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿತ, ಮಂಗಳೂರು, ಉಡುಪಿಯ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಹೆದ್ದಾರಿ ಕುಸಿದು ಬಿದ್ದಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸತತ ಮಳೆ ಸುರಿಯುತ್ತಿದೆ. ಕಳೆದ 3 ದಿನ ಸುರಿದ ಭಾರಿ ಮಳೆಗೆ ಕರಾವಳಿ ಜಿಲ್ಲೆಗಳು ಜಲಾವೃತಗೊಂಡಿದೆ. ಗುಡ್ಡ ಕುಸಿತ ಸಂಭವಿಸಿದೆ.