Operation Ganga: ಒಟ್ಟಿಗೇ 650 ಜನರ ಕರೆತರುವ ವಾಯುಪಡೆ ವಿಮಾನ ನಿಯೋಜನೆ

ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರ ತೆರವು ಕಾರ್ಯಾಚರಣೆಗೆ ಮುಂದಾಗುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ (ಮಾ. 02): ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರ ತೆರವು ಕಾರ್ಯಾಚರಣೆಗೆ ಮುಂದಾಗುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಭಾರೀ ಪ್ರಮಾಣದ ಜನರನ್ನು ಹೊತ್ತುತರುವ ಸಾಮರ್ಥ್ಯ ಹೊಂದಿರುವ ಹಲವು ಸಿ-17 ಗ್ಲೋಬ್‌ಮಾಸ್ಟರ್‌ ವಿಮಾನಗಳನ್ನು ‘ಆಪರೇಷನ್‌ ಗಂಗಾ’ ಕಾರ್ಯಾಚರಣೆಗೆ ನಿಯೋಜಿಸಲು ವಾಯುಪಡೆ ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಕ್ರೇನ್‌ನಲ್ಲಿ ಪರಿಸ್ಥಿತಿ ವಿಷಮವಾಗುತ್ತಿರುವ ಹಿನ್ನೆಲೆಯಲ್ಲಿ, ಜೊತೆಗೆ ಅಂದಾಜು 14000 ಜನರನ್ನು ತುರ್ತಾಗಿ ತೆರವು ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟುಸಂಖ್ಯೆಯಲ್ಲಿ ಸೇನಾ ವಿಮಾನಗಳನ್ನು ಬಳಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ 3 ದಿನಗಳಲ್ಲಿ ಒಟ್ಟು 26 ವಿಮಾನಗಳು ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ತವರಿಗೆ ಕರೆ ತರಲಿವೆ.

Related Video