IAF Chopper Crash: ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ತಜ್ಞರು ಹೇಳೋದೇನು?

*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ
*ಪಶ್ಮಿಮ ಘಟ್ಟ ಆರಂಭವಾಗುವ ಪ್ರದೇಶದಲ್ಲಿ ಸದಾ ದಟ್ಟ ಮಂಜು 
*ತಮಿಳುನಾಡು ದುರಂತ ನಡೆದ ವಾಯುಮಾರ್ಗದ ಬಗ್ಗೆ ತಜ್ಞರ ವಿಶ್ಲೇಷಣೆ!

Share this Video
  • FB
  • Linkdin
  • Whatsapp

ವೆಲ್ಲಿಂಗ್ಟನ್(ಡಿ.08): ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ (CDS General Bipin Rawat), ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Group Captain Varun Singh) ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ಟ್ವೀಟ್‌ನಲ್ಲಿ (IAF Tweet) ತಿಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

IAF Chopper Crash: ಬದುಕುಳಿದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಶೌರ್ಯಚಕ್ರ ಪ್ರಶಸ್ತಿ ವಿಜೇತ!

ಈ ಘಟನೆಯಿಂದ ಇಡೀ ದೇಶವೇ ದಿಗ್ಭ್ರಾಂತಗೊಂಡಿದೆ. ಈ ಬೆನ್ನಲ್ಲೇ ಉನ್ನತ ಅಧಿಕಾರಿಗಳು ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವಾಗ ಪಾಲಿಸಬೇಕಾದ ಪ್ರೋಟೋಕಾಲ್‌ (Protocol) ಬಗ್ಗೆ ದೇಶಾದ್ಯಂತ ಭಾರೀ ಚರ್ಚೆಯಾಗುತ್ತಿದೆ. ನೀಲಗಿರಿ ಪರ್ವತ ( Nilagiri Hills) ಈ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ಎಂಬ ಬಗ್ಗೆ ತಜ್ಞರು (Experts) ವಿಶ್ಲೇಷಿಸಿದ್ದು ಹಲವು ಮಾಹಿತಿ ಬಹಿರಂಗಪಡಿಸಿದ್ದಾರೆ. ಪಶ್ಮಿಮ ಘಟ್ಟ ಆರಂಭವಾಗುವ ಪ್ರದೇಶದಲ್ಲಿ ಸದಾ ದಟ್ಟ ಮಂಜು ಆವರಿಸಿರುತ್ತದೆ. ಹಾಗಾಗಿ ಈ ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪ್ರಯಾಣ ಕಷ್ಟಕರ ಎಂದು ತಜ್ಞರು ಹೇಳಿದ್ದಾರೆ. 

Related Video