
IAF Chopper Crash: ದುರಂತದಲ್ಲಿ ಮಡಿದ ಹರ್ಜಿಂದರ್ ಸಿಂಗ್ ಕರ್ನಾಟಕದ ಅಳಿಯ!
ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಕೂಡಾ ಒಬ್ಬರು. ಸದ್ಯ ಬಂದ ಮಾಹಿತಿ ಅನ್ವಯ ಹರ್ಜಿಂದರ್ ಸಿಂಗ್ ಕರ್ನಾಟಕದ ಜೊತೆ ನಂಟು ಹೊಂದಿದ್ದಾರೆ.
ವೆಲ್ಲಿಂಗ್ಟನ್(ಡಿ.09): ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಕೂಡಾ ಒಬ್ಬರು. ಸದ್ಯ ಬಂದ ಮಾಹಿತಿ ಅನ್ವಯ ಹರ್ಜಿಂದರ್ ಸಿಂಗ್ ಕರ್ನಾಟಕದ ಜೊತೆ ನಂಟು ಹೊಂದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೌದು ಸಾಲ್ಮರದ ಪ್ರಫುಲ್ಲ ಎಂಬುವವರನ್ನು ಮದುವೆಯಾಗಿದ್ದ ಹರ್ಜಿಂದರ್ ಸಿಂಗ್, ಕರ್ನಾಟಕದ ಅಳಿಯ. ಹರ್ಜಿಂದರ್ - ಪ್ರಫುಲ್ಲ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಪ್ರಫುಲ್ಲ ದೆಹಲಿಯ ಮಿಲಿಟರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸದ್ಯ ಅಳಿಯನನ್ನು ಕಳೆದುಕೊಂಡ ಕಾರ್ಕಳದ ಸಾಲ್ಮರದ ಪ್ರಫುಲ್ಲ ಮನೆಯಲ್ಲಿ ಶೋಕದ ಮಡುಗಟ್ಟಿದೆ. ಮೃತ ಸಿಂಗ್ರನ್ನು ನೆನಪಿಸಿಕೊಂಡ ಪ್ರಫುಲ್ಲ ತಾಯಿ, ಅಕ್ಕ- ಭಾವ ಎಲ್ಲರೂ ಕಣ್ನೀರು ಹಾಕಿದ್ದಾರೆ.