
ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!
30 ವರ್ಷಗಳ ಹಿಂದೆ ಡಾ. ರಾಜ್ಕುಮಾರ್ಗೆ ಪ್ರಶಸ್ತಿ ಪ್ರಧಾನ ಮಾಡುವಾಗಲು ಬಂದಿತ್ತು ಮಳೆ, ಕನ್ನಡ ರಾಜ್ಯೋತ್ಸವ ಸಂಭ್ರಮ, ರಾಜ್ಯದಲ್ಲಿ ಚುನಾವಣಾ ಯಾತ್ರೆಗಳ ಪರ್ವ, ಸಿದ್ದರಾಮಯ್ಯ ಹಾಗೂ ಬೊಮ್ಮಾಯಿ ನಡುವೆ ಟಾಕ್ ವಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
30 ವರ್ಷಗಳ ಹಿಂದೆ ಡಾ. ರಾಜ್ಕುಮಾರ್ಗೆ ಇದೇ ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ಕರ್ನಾಟಕದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ವೇಳೆ ವರುಣರಾಯ ಆಶೀರ್ವಾದ ಮಾಡಿದ್ದ. ಇದೀಗ ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ನೀಡಲಾದ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೂ ಮಳೆರಾಯ ಆಶೀರ್ವಾದ ಮಾಡಿದ್ದಾನೆ. ಮಳೆಯಲ್ಲಿ ಸುಧಾಮೂರ್ತಿ, ರಜನಿಕಾಂತ್, ಜ್ಯೂನಿಯರ್ ಎನ್ಟಿಆರ್, ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಿದರು. ಅಶ್ವಿನಿ ಪುನೀತ್ ರಾಜ್ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಾಜ್ ಕುಟುಂಬ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇತ್ತ ಅಭಿಮಾನಿಗಳು ಮಳೆಯನ್ನೂ ಲೆಕ್ಕಿಸದೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Add Asianetnews Kannada as a Preferred Source
