ಗಣರಾಜ್ಯೋತ್ಸವಕ್ಕೆ ಕರುನಾಡಿನ ‘ಅನುಭವ ಮಂಟಪ’ ಸ್ತಬ್ಧಚಿತ್ರ ಸಿದ್ಧ!
ಗಣರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ಅನುಭವ ಮಂಟಪ ಸ್ತಬ್ಧಚಿತ್ರ ಸಿದ್ಧಗೊಂಡಿದ್ದು, ಜ.26ರಂದು ರಾಜಪಥದಲ್ಲಿ ಸಾಗಲು ಸಂಪೂರ್ಣ ಸಜ್ಜಾಗಿದೆ.
ನವದೆಹಲಿ(ಜ.23): ಗಣರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ಅನುಭವ ಮಂಟಪ ಸ್ತಬ್ಧಚಿತ್ರ ಸಿದ್ಧಗೊಂಡಿದ್ದು, ಜ.26ರಂದು ರಾಜಪಥದಲ್ಲಿ ಸಾಗಲು ಸಂಪೂರ್ಣ ಸಜ್ಜಾಗಿದೆ. ಎಲ್ಲಾ ಸಮುದಾಯವನ್ನು ಒಳಗೊಂಡ ಅನುಭವ ಮಂಟಪ ಹೇಗೆ ಕರ್ತವ್ಯ ನಿರ್ವಹಿಸುತ್ತಿತ್ತು ಎಂಬುದರ ಕುರಿತು ಸ್ತಬ್ಧಚಿತ್ರ ಮಾಹಿತಿ ನೀಡುತ್ತದೆ. ಸ್ತಬ್ಧಚಿತ್ರದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ನಿರ್ಮಿಸಲಾಗಿದ್ದು, ನೋಡುಗರನ್ನು ಸೆಳೆಯುತ್ತಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...