ಮಹಾರಾಷ್ಟ್ರ ಬಿಕ್ಕಟ್ಟಿನ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ಮತ್ತೊಂದು ಆಘಾತ!

ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ ಶುರುವಾಗಿದೆ. ಸರ್ಕಾರ ರಚನೆಯಾಗುವ ಮುನ್ನವೇ ಬಿಜೆಪಿ ಮತ್ತು ಶಿವಸೇನೆ ಮೈತ್ರಿ  ಅಂತ್ಯಕಾಣುವ ಲಕ್ಷಣಗಳು ಗೋಚರಿಸಿವೆ. ವಿಧಾನಸಭೆ ಫಲಿತಾಂಶ ಪ್ರಕಟವಾಗಿ 17 ದಿನಗಳು ಕಳೆದಿದ್ದರೂ,  ಬಿಜೆಪಿ-ಶಿವಸೇನೆ ಸಂಬಂಧ ಇನ್ನೂ ಹದಗೆಡುತ್ತಲೇ ಇದೆ. ಈ ನಡುವೆ ಶಿವಸೇನೆಯ ಕೇಂದ್ರ ಸಚಿವ ರಾಜೀನಾಮೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಮುಂಬೈ (ನ.11): ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ ಶುರುವಾಗಿದೆ. ಸರ್ಕಾರ ರಚನೆಯಾಗುವ ಮುನ್ನವೇ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಂತ್ಯಕಾಣುವ ಲಕ್ಷಣಗಳು ಗೋಚರಿಸಿವೆ. 

ವಿಧಾನಸಭೆ ಫಲಿತಾಂಶ ಪ್ರಕಟವಾಗಿ 17 ದಿನಗಳು ಕಳೆದಿದ್ದರೂ, ಬಿಜೆಪಿ-ಶಿವಸೇನೆ ಸಂಬಂಧ ಇನ್ನೂ ಹದಗೆಡುತ್ತಲೇ ಇದೆ. ಈ ನಡುವೆ ಶಿವಸೇನೆಯ ಕೇಂದ್ರ ಸಚಿವ ರಾಜೀನಾಮೆ ನೀಡಿದ್ದಾರೆ.

ಕಳೆದ ಅ. 24 ರಂದು ವಿಧಾನಸಭೆ ಫಲಿತಾಂಶಗಳು ಪ್ರಕಟವಾಗಿದ್ದು, ಬಿಜೆಪಿ-ಶಿವಸೇನೆ ಮೈತ್ರಿಕೂಟ ಬಹುಮತ ಪಡೆದಿದೆ. ಆದರೆ, ಎರಡೂ ಪಕ್ಷಗಳು ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದು, ಸರ್ಕಾರ ರಚನೆ ಕಗ್ಗಾಂಟಾಗಿಯೇ ಉಳಿದಿದೆ. 288 ಸದಸ್ಯಬಲದ ವಿಧಾನಸಭೆಯಲ್ಲಿ, ಬಿಜೆಪಿ105 ಸ್ಥಾನ ಗಳಿಸಿದರೆ, ಮಿತ್ರಪಕ್ಷ ಶಿವಸೇನೆ 56 ಸ್ಥಾನಗಳನ್ನು ಬಾಚಿಕೊಂಡಿದೆ.

ನವೆಂಬರ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Related Video