ಕೊರೋನಾ ಸವಾಲಿನ ನಡುವೆಯೂ ಜಿಡಿಪಿ ಏರಿಕೆ: ಮೋದಿ ಕಾರಣ ಎಂದ ಆರ್‌ಸಿ!

ಕೊರೋನಾ ವೈರಸ್‌ ಕಾರಣದಿಂದಾಗಿ ಕಳೆದ ವರ್ಷ ಮಹಾಪತನ ಕಂಡಿದ್ದ ದೇಶದ ಜಿಡಿಪಿ, ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದಾಖಲೆಯ ಶೇ.20.1ರ ದರದಲ್ಲಿ ವೃದ್ಧಿಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ತ್ವರಿತವಾಗಿ ಚೇತರಿಸಿಕೊಳ್ಳುವ ಸುಳಿವು ದೊರೆತಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಸೆ.02) ಕೊರೋನಾ ವೈರಸ್‌ ಕಾರಣದಿಂದಾಗಿ ಕಳೆದ ವರ್ಷ ಮಹಾಪತನ ಕಂಡಿದ್ದ ದೇಶದ ಜಿಡಿಪಿ, ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದಾಖಲೆಯ ಶೇ.20.1ರ ದರದಲ್ಲಿ ವೃದ್ಧಿಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ತ್ವರಿತವಾಗಿ ಚೇತರಿಸಿಕೊಳ್ಳುವ ಸುಳಿವು ದೊರೆತಿದೆ.

Add Asianetnews Kannada as a Preferred SourcegooglePreferred

ಹೀಗಿರುವಾಗ ಕೊರೋನಾ ಸವಾಲಿನ ಮಧ್ಯೆಯೂ ಜಿಡಿಪಿ ಏರಿಕೆ ರೈತರ, ವ್ಯಾಪಾರಿ ವರ್ಗದ ಪರಿಶ್ರಮವೇ ಕಾರಣ ಎಂದು ಕೌಶಲಾಭಿವೃದ್ಧಿ &ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ & ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಬಣ್ಣಿಸಿದ್ದಾರೆ.

ಜಿಡಿಪಿ ದಾಖಲೆಯ ಏರಿಕೆ ಹಿಂದೆ ಮೋದಿ ಸರ್ಕಾರದ ನೀತಿ, ರೈತರ ದುಡಿಮೆ: ಸಚಿವ ರಾಜೀವ್ ಚಂದ್ರಶೇಖರ್

ಸರ್ಕಾರ ಜಾರಿಗೊಳಿಸಿದ ನೀತಿ ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದೆ ಎಂದಿದ್ದಾರೆ. ಇದೇ ವೇಳೆ ಜಿಡಿಪಿ ಏರಿಕೆಗೆ ಸಂತಸ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿರುವ ಸಚಿವರು ಇದನ್ನು ಭಾರತ ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವುದಕ್ಕೆ ಉದಾಹರಣೆ ಎಂದಿದ್ದಾರೆ.

Related Video