ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಾಂಗ್ರೆಸ್!

ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ, ದೆಹಲಿಯಲ್ಲಿ ಫೆ.7ರಂದು ರಾಜ್ಯ ಕಾಂಗ್ರೆಸ್ ಪ್ರತಿಭಟನೆ, ಡಿಕೆ ಸುರೇಶ್ ಹೇಳಿಕೆಯಿಂದ ರಾಜಕೀಯ ಕೋಲಾಹಲ, ಕುಮಾರಸ್ವಾಮಿ ಕೈಯಲ್ಲಿ ಒಂದು ಅಂಗನವಾಡಿ ಕಟ್ಟಾಕೆ ಆಗಿಲ್ಲ, ಚೆಲುವರಾಯಸ್ವಾಮಿ ವಾಗ್ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

First Published Feb 2, 2024, 10:52 PM IST | Last Updated Feb 2, 2024, 10:52 PM IST

ಸಂಸದ ಡಿಕೆ ಸುರೇಶ್ ಜಿಎಸ್‌ಟಿ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಅನ್ನೋ ಆಕ್ರೋಷದ ಮಾತುಗಳಲ್ಲಿ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ. ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದೊಂಡಿದ್ದಾರೆ. ಆದರೆ ರಾಜ್ಯದ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಹೀಗಾಗಿ ಸಂಸದ ಸುರೇಶ್ ಸರಿಯಾಗಿ ಮಾತನಾಡಿದ್ದಾರೆ ಎಂದಿದ್ದಾರೆ. ಆದರೆ ಡಿಕೆ ಸುರೇಶ್ ಹೇಳಿಕೆಯಿಂದ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಿದ್ದು, ಕಾಂಗ್ರೆಸ್ ಸಂಕಷ್ಟಕ್ಕೆ ಕಾರಣವಾಗಿದೆ.