Asianet Suvarna News Asianet Suvarna News

ಕರ್ತಾರ್‌ಪುರ್ ಕಾರಿಡಾರ್: ಇಮ್ರಾನ್‌ಗೆ ಧನ್ಯವಾದ ಅರ್ಪಿಸಿದ ಮೋದಿ!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರ್ವಾಲ್ ಜಿಲ್ಲೆಯಲ್ಲಿರುವ ಸಿಖ್ ಸಮುದಾಯದ ಪವಿತ್ರ ಕ್ಷೇತ್ರ ಗುರುದ್ವಾರ ದರ್ಬಾರ್ ಸಾಹಿಬ್ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದರು.

ಗುರುದಾಸ್‌ಪುರ್(ನ.09): ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರ್ವಾಲ್ ಜಿಲ್ಲೆಯಲ್ಲಿರುವ ಸಿಖ್ ಸಮುದಾಯದ ಪವಿತ್ರ ಕ್ಷೇತ್ರ ಗುರುದ್ವಾರ ದರ್ಬಾರ್ ಸಾಹಿಬ್ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದರು. ಭಾರತದ ಭಾವನೆಗಳನ್ನು ಅರ್ಥ ಮಾಡಿಕೊಂಡು ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಕೈಜೋಡಿಸಿದ್ದಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ. ಕಾರಿಡಾರ್ ಮೂಲಕ ಗುರು ನಾನಕ್ ಅವರ ಮಾನವೀಯ ತತ್ವಗಳು ಇಡೀ ವಿಶ್ವಕ್ಕೆ ಪಸರಿಸಲಿ ಎಂದು ಪ್ರಧಾನಿ ಮೋದಿ ಈ ವೇಳೆ ಹಾರೈಸಿದರು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..