ಬುದ್ಧನ ಸಂದೇಶ ಇವತ್ತಿನ ಸಂಕಷ್ಟದ ಪರಿಸ್ಥಿತಿಗೆ ಪ್ರಸ್ತುತ: ಮೋದಿ!
ಬುದ್ಧ ಪೂರ್ಣಿಮೆ ಪ್ರಯುಕ್ತ ದೇಶವನ್ನುದ್ದೇಶಿಸಿ ಪಿಎಂ ಮೋದಿ ಮಾತು| ಭಗವಾನ್ ಆಧುನಿಕ ಸಮಾಜದ ಹರಿಕಾರ| ಬುದ್ಧನ ಸಂದೇಶ ಇವತ್ತಿನ ಸಂಕಷ್ಟದ ಪರಿಸ್ಥಿತಿಗೆ ಪ್ರಸ್ತುತ: ಮೋದಿ!
ನವದೆಹಲಿ(ಮೇ.07): ಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತ ಸ್ವಾರ್ಥವಿಲ್ಲದೆ ವಿಶ್ವದ ಜತೆಗೆ ನಿಂತಿದೆ. ಇಡೀ ಜಗತ್ತು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಗವಾನ್ ಬುದ್ಧನ ತತ್ವ, ಸಂದೇಶ, ಬೋಧನೆಗಳು ಪ್ರಸ್ತುತವಾಗಿದ್ದು ಅದರಂತೆ ನಡೆಯಬೇಕಾಗಿದೆ. ಭಾರತ ಈ ಸಂದರ್ಭದಲ್ಲಿ ಎಲ್ಲರ ನಿಸ್ವಾರ್ಥ ಸೇವೆಗೆ ಸದಾ ಸಿದ್ದ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಇಂದು ಬುದ್ಧ ಪೂರ್ಣಿಮೆ ಅಂಗವಾಗಿ ದೇಶದ ಜನತೆಗೆ ಶುಭಾಶಯ ಕೋರಿ ತಮ್ಮ ಮನದಾಳದ ಮಾತುಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನುಡಿದರು.
ಕೊರೋನಾ ಸೋಂಕಿನ ಸಂಕಷ್ಟದ ಪರಿಸ್ಥಿತಿ ಸಂದರ್ಭದಲ್ಲಿ ನನಗೆ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ದೇಶವಾಸಿಗಳೊಂದಿಗೆ ಬುದ್ಧನ ತತ್ವ, ಬೋಧನೆ,ಸಂದೇಶಗಳನ್ನು ನೆನಪಿಸಿಕೊಳ್ಳಲು ನನಗೆ ಇಂದು ಸುದಿನ ಎಂದರು.