Asianet Suvarna News Asianet Suvarna News

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ ನೀಡಿ: ಮೋದಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರ ನೀಡಬೇಕು. ಇದರಿಂದ ರಾಜ್ಯವನ್ನು ಆರ್ಥಿಕ ಅಭಿವೃದ್ಧಿಯ ನಿಟ್ಟಿನಿಲ್ಲಿ ಕೊಂಡೊಯ್ಯಲು ಸಹಕಾರಿಯಾಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಬುದ್ಧಿಜೀವಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳೊಂದಿಗೆ ಅವರು ಸಂವಾದ ನಡೆಸಿದ್ದಾರೆ
 

First Published Mar 7, 2022, 9:05 AM IST | Last Updated Mar 7, 2022, 9:05 AM IST

ಲಕ್ನೋ(ಮಾ.07): ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರ ನೀಡಬೇಕು. ಇದರಿಂದ ರಾಜ್ಯವನ್ನು ಆರ್ಥಿಕ ಅಭಿವೃದ್ಧಿಯ ನಿಟ್ಟಿನಿಲ್ಲಿ ಕೊಂಡೊಯ್ಯಲು ಸಹಕಾರಿಯಾಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಬುದ್ಧಿಜೀವಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳೊಂದಿಗೆ ಅವರು ಸಂವಾದ ನಡೆಸಿದ್ದಾರೆ

ಈ ಸಂವಾದದಲ್ಲಿ ಪದ್ಮಭೂಷಣ ಪ್ರಶಸ್ತಿ ವಿಜೇತ ಹಿಂದೂಸ್ತಾನಿ ಗಾಯಕ ಚನ್ನುಲಾಲ್‌ ಮಿಶ್ರಾ, ಬಿಎಚ್‌ಯುನ ಉಪಕುಲಪತಿ ಸುಧೀರ್‌ ಜೈನ್‌, ವಾರಾಣಸಿಯ ಪ್ರಮುಖ ಪಾನ್‌ ಮಾರಾಟಗಾರ ಅಶ್ವಿನಿ ಚೌರಾಸಿಯಾ ಹಾಗೂ ಶುಕ್ರವಾರ ಮೋದಿ ಟೀ ಕುಡಿದಿದ್ದ ಅಂಗಡಿಯ ಮಾರಾಟಗಾರ ಪಪ್ಪು ಸೇರಿದಂತೆ ಸುಮಾರು 200 ಜನÜ ಈ ಸಂವಾದಲ್ಲಿ ಭಾಗವಹಿಸಿದ್ದರು.

Video Top Stories