Asianet Suvarna News Asianet Suvarna News

ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

  • ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ರಾಜ್ಯ ಪ್ರವಾಸ
  • ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ರಾಜ್ಯದಲ್ಲಿ ಪ್ರಧಾನಿ ಕಲರವ
  • ಮೈಸೂರಿನಲ್ಲಿ 15 ಫಲಾನುಭವಿಗಳ ಜೊತೆ ಮೋದಿ ಸಂವಾದ

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಬೆಂಗಳೂರಿನ ಕೊಮ್ಮಘಟ್ಟದಲ್ಲಿ 27,000 ಕೋಟಿ ರೂಪಾಯಿ ಅಭಿವೃದ್ಧಿ ಕಾಮಾಗಾರಿ ಯೋಜನೆಗೆ ಚಾಲನೆ ನೀಡಿದ್ದಾರೆ.ಇಂದು ಬೆಳಗ್ಗೆ 11.40  ಗಂಟೆಗೆ ಯಲಹಂಕಾ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. 12.50ಕ್ಕೆ ಐಐಎಸ್‌ಗೆ ಆಗಮಿಸಿದ ಮೋದಿ, ಮೆದುಳು ಸಂಶೋದನಾ ಕೇಂದ್ರ ಉದ್ಘಾಟಿಸಿದರು. ಬಿಳಿಕ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮ ಮುಗಿಸಿದ ಪ್ರಧಾನಿ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ತಾಯಿ ಚಾಮಂಡೇಶ್ವರಿ ದೇವಿಯ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದರು. ಮೋದಿ ರಾಜ್ಯ ಪ್ರವಾಸದ ಸಂಪೂರ್ಣ ವಿವರ ಇಲ್ಲಿದೆ

Video Top Stories