Asianet Suvarna News Asianet Suvarna News

ದೆಹಲಿ ಸಿಂಘು ಗಡಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ, ರೈತರ ಮೇಲೆ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ

ದೆಹಲಿಯ ಸಿಂಘು ಗಡಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸ್ಥಳೀಯರು ಮತ್ತು ರೈತರ ನಡುವೆ ಸಂಘರ್ಷ, ಮಾತಿನ ಚಕಮಕಿ ನಡೆದಿದೆ.  ಪ್ರತಿಭಟನಾನಿರತರ ಮೇಲೆ ಪೊಲೀಸರ ಮೇಲೆ ಅಶ್ರುವಾಯು ಸಿಡಿಸಿದ್ದಾರೆ. 
 

ನವದೆಹಲಿ(ಜ. 29): ಸಿಂಘು ಗಡಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸ್ಥಳೀಯರು ಮತ್ತು ರೈತರ ನಡುವೆ ಸಂಘರ್ಷ, ಮಾತಿನ ಚಕಮಕಿ ನಡೆದಿದೆ.  ಪ್ರತಿಭಟನಾನಿರತರ ಮೇಲೆ ಪೊಲೀಸರ ಮೇಲೆ ಅಶ್ರುವಾಯು ಸಿಡಿಸಿದ್ದಾರೆ. 

ದೆಹಲಿ ದಂಗಲ್ : ಲಾಲ್ ಕಿಲಾ ಕೋಲಾಹಲ ಸೃಷ್ಟಿಸಿದವರೇ ನಾಪತ್ತೆ!

ಪ್ರತಿಭಟನೆ ನಡೆಯುತ್ತಿರುವ ಸ್ಥಳದಿಂದ ರೈತರನ್ನು ತೆರವುಗೊಳಿಸಬೇಕಂದು ಅಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳೀಯರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ರೈತರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ. 
 

Video Top Stories