Asianet Suvarna News Asianet Suvarna News

ಹತ್ರಾಸ್‌ನಲ್ಲಿ ಕಾಲ್ತುಳಿತ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ರಾಹುಲ್‌ ವಾಗ್ದಾಳಿ, ಭೋಲೆ ಬಾಬಾ ನಾಪತ್ತೆ

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ಹತ್ರಾಸ್‌ಗೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
 

First Published Jul 5, 2024, 11:58 AM IST | Last Updated Jul 5, 2024, 11:58 AM IST

ಉತ್ತರ ಪ್ರದೇಶದ (Uttar Prades) ಹತ್ರಾಸ್‌ನಲ್ಲಿ ಕಾಲ್ತುಳಿತ ದುರಂತ(Hathras Stampede Incident) ಸಂಭವಿಸಿದ ಹಿನ್ನೆಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಈ ಘಟನೆ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ಹತ್ರಾಸ್‌ ಕಾಲ್ತುಳಿತ ದುರಂತದಲ್ಲಿ 121 ಜನ ಸಾವಿಗೀಡಾಗಿದ್ದಾರೆ. ಗಾಯಾಳು ಕುಟುಂಬಗಳನ್ನು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ. ಇಲ್ಲಿತನಕ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 2 ರ ಸಂಜೆ ಧಾರ್ಮಿಕ ಬೋಧಕ ಸೂರಜ್ ಪಾಲ್ ಅವರ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ. ಆದ್ರೆ ಇಲ್ಲಿತನಕ ಭೋಲೆ ಬಾಬಾ(Bhole Baba) ಮಾತ್ರ ಪತ್ತೆಯಾಗಿಲ್ಲ.

ಇದನ್ನೂ ವೀಕ್ಷಿಸಿ:  ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ