Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

Share this Video
  • FB
  • Linkdin
  • Whatsapp

ಚೆನ್ನೈ(ಡಿ.09): ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೂಲುರು ವಾಯುಲೆನೆಯಿಂದ ಸೇನಾ ವಿಮಾನದಲ್ಲಿ ಪಾರ್ಥೀವ ಶರೀರಗಳನ್ನು ನವದೆಹಲಿಗೆ ತರಲಾಗುತ್ತಿದೆ. ದೇಶದಲ್ಲಿ ದುಃಖ ಮಡುಗಟ್ಟಿದೆ. ಗುರುವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತದ ಮೊದಲ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಸೇನಾಧಿಕಾರಿಗಳು ಮೃತಪಟ್ಟಿದ್ದರು. ಇದು ದೇಶದಲ್ಲಿ ನಡೆದ ಅತ್ಯಂತ ಘೋರ ಸೇನಾ ಹೆಲಿಕಾಪ್ಟರ್ ಪತನವಾಗಿದೆ.

Related Video