
ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್ವೆಜ್ ಪ್ರಸಾದ ತಿನ್ನಿಸಿದ ಜಗನ್!
ದೇಶಾದ್ಯಂತ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬರಸಿಡಿಲು ಬಡಿದಿದೆ. ಜಗನ್ ಅವಧಿಯಲ್ಲಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ದೃಢವಾಗಿದೆ. ವೈಎಸ್ಆರ್ ಈ ಆರೋಪ ಅಲ್ಲಗಳೆದರೂ, ಟಿಡಿಪಿ, ವೈಎಸ್ಆರ್ ವಿರುದ್ಧ ಚಾಟಿ ಬೀಸಿದೆ.
ಬೆಂಗಳೂರು (ಸೆ.20): ಆಂಧ್ರಪ್ರದೇಶದಲ್ಲಿ ತಿರುಪತಿ ಲಡ್ಡು ಲಡಾಯಿ ಕಿಚ್ಚು ಜೋರಾಗಿದೆ. ರಾಜಕೀಯ ವಾಗ್ವಾದಕ್ಕೆ ತಿರುಪತಿ ತಿಮ್ಮಪ್ಪನ ಲಡ್ಡು ಕಾರಣವಾಗಿದೆ. ಲ್ಯಾಬ್ ಪರೀಕ್ಷೆಯಲ್ಲೂ ‘ತಿರುಪತಿ ಪ್ರಸಾದ’ದ ರಹಸ್ಯ ಸಾಬೀತಾಗಿದೆ.
Add Asianetnews Kannada as a Preferred Source

ಜಗನ್ ಸರ್ಕಾರವಿದ್ದಾಗ ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ ಎನ್ನಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ಮಾತಿಗೆ ಲ್ಯಾಬ್ ರಿಪೋರ್ಟ್ ಸಾಕ್ಷ್ಯವನ್ನೂ ನೀಡಲಾಗಿದೆ. ಲ್ಯಾಬ್ ರಿಪೋರ್ಟ್ನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿದೆ.
History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!
ಇದರ ನಡುವೆ ಟಿಟಿಡಿಗೆ ತುಪ್ಪ ಸರಬರಾಜು ಮಾಡುತ್ತಿದ್ದ ತಮಿಳುನಾಡು ಮೂಲದ ಕಂಪನಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇನ್ನೊಂದೆಡೆ ಕಂಪನಿ ಕೂಡ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದೆ.