Asianet Suvarna News Asianet Suvarna News

ಏಕಾಏಕಿಯಾಗಿ ಅಭ್ಯಾಸ ನಿಲ್ಲಿಸಿ ರಾಂಚಿಗೆ ತೆರಳಿದ ಧೋನಿ..!

ಇದೀಗ ಕೊರೋನಾ ವೈರಸ್ ಭೀತಿಯಿಂದಾಗಿ ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ ಧೋನಿ ದಿಢೀರ್ ಅಗಿ ತವರಿಗೆ ಮರಳಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.
 

ಚೆನ್ನೈ(ಮಾ.16): 2020ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್. ಧೋನಿ ಚೆನ್ನೈನಲ್ಲಿ ಕ್ರಿಕೆಟ್ ಅಭ್ಯಾಸ ಆರಂಭಿಸಿದ್ದರು. ಆದರೆ ಇದೀಗ ಇದ್ದಕ್ಕಿದ್ದಂತೆ ಬ್ಯಾಟ್ ಸೈಡಿಗಿಟ್ಟು ರಾಂಚಿಗೆ ಮರಳಿದ್ದಾರೆ.

2009ರ IPL ಮಾದರಿ ಅನುಸರಿಸಲು ಬಿಸಿಸಿಐ ಪ್ಲಾನ್..!

ಹೌದು, 2019ರ ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ಸೋಲಿನ ಬಳಿಕ ಧೋನಿ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದರು. ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಧೋನಿ ಐಪಿಎಲ್‌ ಟೂರ್ನಿಯಲ್ಲಿ ಮಿಂಚಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. 

IPL 2020: ಚೆನ್ನೈ ತೊರೆದ CSK ನಾಯಕ MS ಧೋನಿ..!

ಆದರೆ ಇದೀಗ ಕೊರೋನಾ ವೈರಸ್ ಭೀತಿಯಿಂದಾಗಿ ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ ಧೋನಿ ದಿಢೀರ್ ಅಗಿ ತವರಿಗೆ ಮರಳಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.
 

Video Top Stories