Asianet Suvarna News Asianet Suvarna News

ಕೊರೋನಾ ಮಧ್ಯೆ ಸಿದ್ಧೇಶ್ವರ ಸ್ವಾಮಿ ಜಾತ್ರೆ: 13 ಮಂದಿ ಅರೆಸ್ಟ್‌

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಕಲಬಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ನಡೆದ ಸಿದ್ಧೇಶ್ವರ ಸ್ವಾಮಿಯ ಜಾತ್ರೆ| ಟ್ರಸ್ಟ್‌ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿದಂತೆ 13 ಮಂದಿ ಬಂಧನ| 

ಕಲಬುರಗಿ(ಏ.18): ಲಾಕ್‌ಡೌನ್‌ ಮಧ್ಯೆ ಅದ್ಧೂರಿಯಾಗಿ ಸಿದ್ಧೇಶ್ವರ ಸ್ವಾಮಿಯ ರಥೋತ್ಸವ ಮಾಡಿದ ಹಿನ್ನೆಲೆಯಲ್ಲಿ ಪೊಲೀಸುರು 13 ಮಂದಿಯನ್ನ ಬಂಧಿಸಿದ ಘಟನೆ ನಗರದಲ್ಲಿ ನಡೆದಿದೆ. ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದ ಸಿದ್ಧೇಶ್ವರ ಸ್ವಾಮಿಯ ಜಾತ್ರೆ ನಡೆಸಲಾಗಿತ್ತು.

ಲಾಕ್‌ಡೌನ್‌ ಉಲ್ಲಂಘಿಸಿ ದೇವಳದ ಜಾತ್ರೆ! ಬೆಚ್ಚಿಬಿದ್ದ ಹಾಟ್‌ಸ್ಪಾಟ್‌ ಜಿಲ್ಲೆ

ಹೀಗಾಗಿ ಟ್ರಸ್ಟ್‌ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿದಂತೆ 13 ಮಂದಿಯನ್ನ ಅರೆಸ್ಟ್‌ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದೆ ರಾವೂರ ಗ್ರಾಮದಲ್ಲಿ ಅದ್ಧೂರಿಯಾಗಿ ಜಾತ್ರೆಯನ್ನ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಜೊತೆಗೆ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿತ್ತು. 
 

Video Top Stories