
Bengaluru: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ, 27 ವರ್ಷ ಯುವಕ ಸಾವು
* ಸಂಜಯ್ ನಗರದ ಪಾರ್ಕ್ ಬಳಿ ನಡೆದ ದುರ್ಘಟನೆ
* ಪಾರ್ಕ್ ಬಳಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ವಿದ್ಯುತ್ ತಂತಿ
* ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು?
ಬೆಂಗಳೂರು(ಏ.26): ಬೆಂಗ್ಳೂರಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿಯಾಗಿದೆ. ಹೌದು, ವಿದ್ಯುತ್ ತಂತಿ ತಗುಲಿ 27 ವರ್ಷದ ಕಿಶೋರ್ ಎಂಬ ಯುವಕ ಮೃತಪಟ್ಟಿದ್ದಾನೆ. ಸಂಜಯ್ ನಗರದ ಪಾರ್ಕ್ ಬಳಿ ಈ ದುರ್ಘಟನೆ ಸಂಭವಿಸಿದೆ. ಪಾರ್ಕ್ ಬಳಿ ವಿದ್ಯುತ್ ತಂತಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು, ಇದನ್ನ ಗಮನಿಸದ ಕಿಶೋರ್ ವಿದ್ಯುತ್ ತಂತಿ ತುಳಿದ ಪರಿಣಾಮ ಸಾವನ್ನಪ್ಪಿದ್ದಾನೆ. ಹೀಗಾಗಿ ಬೆಸ್ಕಾಂ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಸಂಜಯ್ನನ್ನ ಕಳೆದುಕೊಂಡಿದ್ದರಿಂದ ಬೆಸ್ಕಾಂ ಅಧಿಕಾರಿಗಳಿಗೆ ಕುಟುಂಬಸ್ಥರು ಹಿಡಿಶಾಪ ಹಾಕಿದ್ದಾರೆ. ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಲೇಜ್ ಆವರಣದಲ್ಲಿ ಕೂದಲಿಡಿದು ಕಿತ್ತಾಡಿಕೊಂಡ ಹುಡುಗಿಯರು, ನೋಡಿ ಮಜಾ ತಗೊಂಡ ಹುಡುಗ್ರು