Asianet Suvarna News Asianet Suvarna News

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಹೊಸ ಏರೋಸ್ಪೇಸ್‌ ನೀತಿಯನ್ನು ಘೋಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಚಾಲನೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 8 ದಶಕಗಳಿಂದ ಬಾಹ್ಯಾಕಾಶ, ರಕ್ಷಣೆ, ವೈಮಾನಿಕ ಕ್ಷೇತ್ರಕ್ಕೆ ಕರ್ನಾಟಕ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಇದು ಇಡೀ ಜಗತ್ತಿನಲ್ಲೇ ಅತ್ಯಂತ ದೊಡ್ಡ ಏರ್‌ ಶೋ ಆಗಿದ್ದು, ರಕ್ಷಣಾ ವಲಯ ಮತ್ತು ಇಂಥ ಏರ್‌ ಶೋ ನಡೆಸುವಲ್ಲಿ ಕರ್ನಾಟಕ ಮತ್ತು ಭಾರತದ ಶಕ್ತಿ ಇವತ್ತು ಜಗತ್ತಿಗೆ ತಿಳಿದಂತಾಗಿದೆ ಎಂದರು.1960ರ ದಶಕದಲ್ಲಿ ಬೆಂಗಳೂರಿನಲ್ಲಿ ಇಸ್ರೊ ಆರಂಭವಾಯಿತು. 1960ರಲ್ಲಿ ಆರ್ಯಭಟ ಉಪಗ್ರಹವನ್ನು ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು ಎಂದು ತಿಳಿಸಿದರು.

Aero India 2023: ಏರೋ ಇಂಡಿಯಾ ಭಾರತದ ಶಕ್ತಿ: ಪ್ರಧಾನಿ ಮೋದಿ