Asianet Suvarna News Asianet Suvarna News

ಗಿರಿನಾಡಲ್ಲಿ ಆಕ್ರೋಶಕ್ಕೆ ಕಾರಣವಾದ ಸಿಎಂ ಮೆಡಿಕಲ್ ಕಾಲೇಜ್ ಹೇಳಿಕೆ!

ಯಾದಗರಿ ಮೆಡಿಕಲ್ ಕಾಲೇಜಿನ ಕುರಿತು ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಗಿರಿನಾಡಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಯಾದಗಿರಿಯಲ್ಲಿ ಮೆಡಿಕಲ್ ಕಾಲೇಜು ಕಟ್ಟುವುದರಿಂದ ಪ್ರಯೋಜನವಿಲ್ಲ ಎಂದು ಸಿಎಂ ನುಡಿದಿದ್ದರು.

ಯಾದಗಿರಿ(ಜೂ.29): ಯಾದಗರಿ ಮೆಡಿಕಲ್ ಕಾಲೇಜಿನ ಕುರಿತು ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಗಿರಿನಾಡಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಯಾದಗಿರಿಯಲ್ಲಿ ಮೆಡಿಕಲ್ ಕಾಲೇಜು ಕಟ್ಟುವುದರಿಂದ ಪ್ರಯೋಜನವಿಲ್ಲ ಎಂದು ಸಿಎಂ ನುಡಿದಿದ್ದರು. ಇದರಿಂದ ಕೆರಳಿರುವ ಯಾದಗಿರಿ ಜಿಲ್ಲಾ ಜನರು, ಹೈ-ಕ ಭಾಗವೆಂದರೆ ಸಿಎಂ ನಿರ್ಲಕ್ಷ್ಯ ತೋರುತ್ತಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ್, ಯಾದಗಿರಿ ಇಡೀ ರಾಜ್ಯದಲ್ಲೇ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಅಪಖ್ಯಾತಿಗೆ ಗುರಿಯಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ನಿರ್ಲಕ್ಷ್ಯ ತೋರುವುದು ಸಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ ... 
 

Video Top Stories