ವಿಜಯಪುರ: ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಕಲಾವಿದ ಸಾವು

ಮೃತ ಶರಣು ವೃತ್ತಿಯಲ್ಲಿ ಪೋಸ್ಟ್‌ ಮ್ಯಾನ್‌ ಆಗಿದ್ದರು. ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಶರಣು ಪಾತ್ರವೊಂದನ್ನು ಮಾಡಿದ್ದರು. ವೇದಿಕೆಯ ಮೇಲೆ ನಾಟಕ ಮಾಡೋ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ವಿಜಯಪುರ(ಸೆ.15): ನಾಟಕ ಮಾಡುವ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದನೊಬ್ಬ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ್‌ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದ ಸಾವನ್ನಪ್ಪಿದ್ದಾರೆ. ಶರಣು ಎಂಬಾತನೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಶರಣು ವೃತ್ತಿಯಲ್ಲಿ ಪೋಸ್ಟ್‌ ಮ್ಯಾನ್‌ ಆಗಿದ್ದರು. ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ನಾಟಕದಲ್ಲಿ ಶರಣು ಪಾತ್ರವೊಂದನ್ನು ಮಾಡಿದ್ದರು. ವೇದಿಕೆಯ ಮೇಲೆ ನಾಟಕ ಮಾಡೋ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಂಪ್ಯೂಟರ್‌ ಕೆಲ್ಸ ಮಾಡುವಾಗ ಸ್ಟ್ರೆಸ್‌ ತಪ್ಪಿಸಲು ಹೀಗೆ ಮಾಡಿ 

Related Video