
ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!
* ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರ ಸ್ವಾಗತ ಪ್ರಕರಣ
* ಮೂವರು ಪೊಲೀಸರ ಅಮಾನತು
* ರಾಷ್ಟ್ರ ಮಟ್ಟದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ನಾಡಬಂದೂಕು ಪ್ರಕರಣ
ಯಾದಗಿರಿ(ಆ.19) ನಾಡ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಈ ಪ್ರಕರಣದ ಬಗ್ಗೆ ನಿರಂತರವಾಗಿ ವರದಿ ಪ್ರಸಾರ ಮಾಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿತ್ತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜನಾಶೀರ್ವಾದ ಯಾತ್ರೆಗೆ ಕಪ್ಪು ಚುಕ್ಕೆ ಇಟ್ಟ ಖೂಬಾ
ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಪ್ರತಿಕ್ರಿಯೆ ನೀಡಿದ್ದರು. ನಾಡಬಂದೂಕಿನಿಂದ ಗುಂಡು ಹಾರಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಅಧಿಕಾರ ಸಿಕ್ಕವರು ಈ ರೀತಿ ವರ್ತನೆ ಮಾಡುವುದು ಸರಿಯೇ ಎಂದು ಜನ ಪ್ರಶ್ನೆ ಮಾಡಿದ್ದರು.