Asianet Suvarna News Asianet Suvarna News

ಕೊರೊನಾ ಜಾಗೃತಿಗಾಗಿ ಯಮ-ಕಿಂಕರನ ವೇಷ ತೊಟ್ಟು ರಸ್ತೆಗಿಳಿದ ಬಾಗೇಪಲ್ಲಿ ಪೊಲೀಸರು

ಕೊರೊನಾ ಜಾಗೃತಿಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪೊಲೀಸರು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ಯಮ, ಚಿತ್ರಗುಪ್ತನ ವೇಷ ಧರಿಸಿ ಪೊಲೀಸ್ ಸಿಬ್ಬಂದಿ ಬೀದಿಗಿಳಿದಿದ್ದಾರೆ. ಮಾಸ್ಕ್ ಧರಿಸದಿದ್ದವರಿಗೆ, ಸುಖಾಸುಮ್ಮನೆ ರಸ್ತೆಯಲ್ಲಿ ಓಡಾಡುವವರಿಗೆ ಪಾತ್ರಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಮೇ. 01): ಕೊರೊನಾ ಜಾಗೃತಿಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪೊಲೀಸರು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ಯಮ, ಚಿತ್ರಗುಪ್ತನ ವೇಷ ಧರಿಸಿ ಪೊಲೀಸ್ ಸಿಬ್ಬಂದಿ ಬೀದಿಗಿಳಿದಿದ್ದಾರೆ. ಮಾಸ್ಕ್ ಧರಿಸದಿದ್ದವರಿಗೆ, ಸುಖಾಸುಮ್ಮನೆ ರಸ್ತೆಯಲ್ಲಿ ಓಡಾಡುವವರಿಗೆ ಪಾತ್ರಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ. 

ಕೊರೊನಾ ವಾರಿಯರ್ಸ್‌ಗೆ ಪುಟಾಣಿ ಸಾಥ್; ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ

ಬಾಗೇಪಲ್ಲಿ ಪಕ್ಕದಲ್ಲಿರೋ ಹಿಂದೂಪುರ ರೆಡ್‌ ಝೋನ್‌ನಲ್ಲಿರುವುದರಿಂದ ಜನರನ್ನು ಅಲರ್ಟ್ ಮಾಡಲು ಪೊಲೀಸರು ಹೊಸ ಪ್ರಯತ್ನ ಮಾಡಿದ್ದಾರೆ. ಇವರ ಪ್ರಯತ್ನಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.