Asianet Suvarna News Asianet Suvarna News

ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ| ಯಡಿಯೂರಪ್ಪ ಹಾಗೂ ಸಚಿವ ಆನಂದ ಸಿಂಗ್‌ ವಿರುದ್ಧ ಹರಿಹಾಯ್ದ ಕನ್ನಡ ಪರ ಸಂಘಟನೆಗಳು| 

ಬಳ್ಳಾರಿ(ನ.26): ಅಖಂಡ ಬಳ್ಳಾರಿ ಜಿಲ್ಲೆಯ ಉಳಿವಿಗಾಗಿ ಇಂದು(ಗುರುವಾರ) ಬಳ್ಳಾರಿ ಬಂದ್‌ ನಡೆಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ವಿಜಯನಗರ ಜಿಲ್ಲಾ ರಚನೆಯನ್ನ ವಿರೋಧಿಸಿದ ಸುಮಾರು 15 ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಕನ್ನಡ ಪರ ಸಂಘಟನೆಗಳು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ವಿರುದ್ಧ ಹರಿಹಾಯ್ದಿವೆ. ಕತ್ತೆ ಮೇಲೆ ಏರಿ ಪ್ರತಿಭಟನೆ ನಡೆಸುತ್ತಿದ್ದಾರೆ. 
 

Video Top Stories