
ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದೆದ್ದ ಕೇಸರಿ ಪಡೆ: ಬೆಳಗಾವಿಯಲ್ಲಿ ಪ್ರತಿಭಟನೆ
ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಪ್ರತಿಕೃತಿ ದಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿ, ಸತೀಶ್ ಕ್ಷಮೆ ಕೇಳುವಂತೆ ಪಟ್ಟು ಹಿಡಿಯಲಾಗಿದೆ. ಗರ್ವದಿಂದ ಹೇಳಿ ನಾನು ಹಿಂದೂ ಎಂದು ಘೋಷಣೆಯೊಂದಿಗೆ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮಾಡಿ, ಸತೀಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ