
ಬೆಂಗಳೂರು: ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಬ್ಬರ: ಬೇಕರಿಗೆ ನುಗ್ಗಿ ಗಲಾಟೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಡಿ ರೌಡಿಗಳ ಅಬ್ಬರ ಹೆಚ್ಚಾಗಿದ್ದು, ಸಿಗರೇಟ್ ಕೇಳುವ ನೆಪದಲ್ಲಿ ಬೇಕರಿಗೆ ನುಗ್ಗಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ.
ಬೆಂಗಳೂರು: ಬೆಂಗಳೂರಿನ ಹೆಚ್.ಎ.ಎಲ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಗೇಟ್ ಮುಖ್ಯ ರಸ್ತೆಯಲ್ಲಿ ಬೇಕರಿಗೆ ನುಗ್ಗಿ ಪುಡಿ ರೌಡಿಗಳು ವಸ್ತುಗಳನ್ನು ಚೆಲ್ಲಾಡಿದ್ದಾರೆ. ರಾತ್ರಿ 11 ಗಂಟೆ ಸುಮಾರಿಗೆ ಬೇಕರಿಗೆ ಬಂದು ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ. ಪುಡಿ ರೌಡಿಗಳ ಅಟ್ಟಹಾಸ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯನ್ನು ಬೇಕರಿ ಉದ್ಯಮ ಸಂಘ ಖಂಡಿಸಿದೆ.
Add Asianetnews Kannada as a Preferred Source

Udupi: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಭೀಕರ ಅಪಘಾತ: 3 ಮಂದಿ ಸಾವು