Big 3: ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣ: ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಯಾದಗಿರಿ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಮೂರು ಜೀವಗಳು ಹಾರಿ ಹೋಗಿದ್ವು. ಬಿಗ್3 ಇಂಪ್ಯಾಕ್ಟ್'ನಿಂದ ಮೃತ ಕುಟುಂಬಸ್ಥರಿಗೆ ಪರಿಹಾರ ಧನ ಸಿಕ್ಕಂತಾಗಿದೆ.

Share this Video
  • FB
  • Linkdin
  • Whatsapp

ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ್ರು. ಗ್ರಾಮದ ಟ್ಯಾಂಕಿನ ನೀರು ಕಲುಷಿತಗೊಂಡು ಇದೇ ನೀರು ಹಲವರ ಜೀವಕ್ಕೆ ಕಂಠಕವಾಯ್ತು. ಜಿಲ್ಲಾಡಳಿತ ಎಚ್ಚೆತ್ತು ಮುಂದಿನ ಕ್ರಮಕ್ಕೆ ಮುಂದಾಯ್ತು. ಆದ್ರೆ ಸಾವಿಗೀಡಾದ ಕುಟುಂಬಕ್ಕೆ ಪರಿಹಾರ ಮಾತ್ರ ಕೊಟ್ಟಿರಲಿಲ್ಲ. ಈ ಬಗ್ಗೆ ಬಿಗ್ 3 ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಅಧಿವೇಶನದಲ್ಲಿ ಅನಪುರ ಘಟನೆ ಪ್ರಸ್ತಾಪಿಸಿದರು. ಮೃತ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದ್ರು. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕೂಡ ತಕ್ಷಣವೇ ಪರಿಹಾರ ನೀಡುವಂತೆ ಸಿಎಂಗೆ ಮನವಿ ಪತ್ರ ಕೂಡ ಬರೆದರು. ಸಿಎಂ ಸ್ಪಂದನೆ ನೀಡಿದ್ದು, ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆಯ ಆದೇಶ ಕೂಡ ಹೊರಬಿದ್ದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video