Asianet Suvarna News Asianet Suvarna News

ತುಂಬಿದ KRS ಜಲಾಶಯಕ್ಕೆ ಸಿಎಂ 5ನೇ ಬಾರಿ ಬಾಗೀನ ಸಮರ್ಪಣೆ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತುಂಬಿದ ಕೃಷ್ಣ ರಾಜ ಸಾಗರ ಜಲಾಶಯಕ್ಕೆ ಇಂದು ಬಾಗೀನ ಸಮರ್ಪಣೆ ಮಾಡಲಿದ್ದಾರೆ. ಒಟ್ಟು ಐದನೇ ಬಾರಿಗೆ ಮುಖ್ಯಮಂತ್ರಿ ಬಾಗೀನ ಅರ್ಪಿಸುತ್ತಿದ್ದಾರೆ.

ಮಂಡ್ಯ (ಆ.21) : ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇಂದು ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ(ಕೆಆರ್‌ಎಸ್‌) ಹಾಗೂ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಿದ್ದಾರೆ.

 ಇಂದು ಮಧ್ಯಾಹ್ನ 12ಕ್ಕೆ ಕೆಆರ್‌ಎಸ್‌ಗೆ ಬಾಗೀನ ಅರ್ಪಿಸಲಿದ್ದಾರೆ. ಐದನೇ ಬಾರಿ ಸಿಎಂ ಯಡಿಯೂರಪ್ಪ ಜಲಾಶಯಕ್ಕೆ ಬಾಗೀನ ಅರ್ಪಿಸುತ್ತಿದ್ದಾರೆ. ಇನ್ನು ಮಧ್ಯಾಹ್ನ 1.15ಕ್ಕೆ ಎಚ್‌.ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವರು. 

 

Video Top Stories