Asianet Suvarna News Asianet Suvarna News

ಸಿಲಿಕಾನ್‌ ಸಿಟಿಯಲ್ಲಿ ಘನಘೋರ ದುರಂತ ! ಕಾರು ಚಾಲಕನ ಎಡವಟ್ಟಿಗೆ ಕಂದಮ್ಮ ಬಲಿ ?

ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಬೆಂಗಳೂರಿನಲ್ಲಿ ಘನಘೋರ ದುರಂತವೊಂದು ನಡೆದಿದೆ. ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು(Car) ಚಾಲಕನೋರ್ವ ಕಾರನ್ನು ಹತ್ತಿಸಿದ್ದಾನೆ. ಸದ್ಯ ಚಾಲಕನ ಈ ವರ್ತನೆಗೆ ಮೂರು ವರ್ಷದ ಬಾಲಕಿ(Child) ಬಲಿಯಾಗಿದ್ದಾಳೆ. ಸಮೃದ್ಧಿ ಅಪಾರ್ಟ್‌ಮೆಂಟ್‌​ ಮುಂಭಾಗದಲ್ಲಿ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸದೇ ಅದೇ ಅಪಾರ್ಟ್ಮೆಂಟ್(Apartment) ನಿವಾಸಿಯೊಬ್ಬರು ಕಾರು ಹರಿಸಿಕೊಂಡು ಹೋಗಿದ್ದಾರೆ. ಕಾರು ಹರಿದಿರುವ ಬಗ್ಗೆ ಮಾಹಿತಿ ಇಲ್ಲದ ಪೋಷಕರು, ಅಪಾರ್ಟ್‌ಮೆಂಟ್ ಗೇಟಿಗೆ ಸಿಲುಕಿಹಾಕಿಕೊಂಡು ಮಗು ಬಿದ್ದಿರಬಹುದೆಂದು ಭಾವಿಸಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಭುಜದ ಮೂಳೆ ಮುರಿದು ಗಂಭೀರವಾಗಿ ಗಾಯಗೊಂಡಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ನಂತರ ಪೋಷಕರು ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಗುವನ್ನು ಪರಿಶೀಲಿಸಿದ ವೈದ್ಯರು ತಕ್ಷಣ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮಗು ಮೃತಪಟ್ಟಿದೆ. ಮಗುವಿನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪೋಷಕರು, ಕಾರಣ ಪತ್ತೆಹಚ್ಚುವಂತೆ ಡಿಸೆಂಬರ್ 10 ರಂದು ಬೆಳ್ಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಕಾರು ಮಗುವಿನ ಮೇಲೆ ಹರಿದಿರುವುದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  Weekly Horoscope: ಈ ವಾರದ ವಿಶೇಷ ಏನು ? ಇಂದಿನಿಂದ ಧನುರ್ಮಾಸ ಆರಂಭ, ಏನೆಲ್ಲಾ ಮಾಡಬೇಕು ?

Video Top Stories