ಕೇರಳದ ಜೈ ಹಿಂದ್ ಚಾನೆಲ್ ಮತ್ತು ಡಿಕೆಶಿ..ಏನಿದರ ಗುಟ್ಟು..? ರಾಜಕೀಯ ಷಡ್ಯಂತ್ರ ಅಂದಿದ್ದೇಕೆ ಡಿಸಿಎಂ..?

ಸಿಬಿಐ ಚಕ್ರವ್ಯೂಹದಲ್ಲಿ ಬಂಧಿಯಾಗ್ತಾರಾ ಕನಕಪುರದ ಬೇಟೆಗಾರ..?
ಕೇಸ್ ವಾಪಸ್ ಪಡೆದರೂ ಕನಕಾಧಿಪತಿಗೆ ತಪ್ಪಲ್ವಾ ಸಿಬಿಐ ಕಂಟಕ..?
ಡಿಕೆ ಶಿವಕುಮಾರ್‌ ಕೊರಳಿಗೆ ಉರುಳಾಗುತ್ತಾ "ಅಕ್ರಮ ಆಸ್ತಿ" ರಹಸ್ಯ..?

Share this Video
  • FB
  • Linkdin
  • Whatsapp

ರಾಜಕೀಯದಲ್ಲಿ ಅದೆಷ್ಟೋ ಚಕ್ರವ್ಯೂಹಗಳನ್ನು ಭೇದಿಸಿ ನಿಂತಿರೋ ಬೇಟೆಗಾರನಿಗೆ ಸಿಬಿಐ(CBI) ಚಕ್ರವ್ಯೂಹ. ರಣರಂಗದ ಚದುರಂಗದಲ್ಲಿ ಅತಿ ರೋಚಕ ದಾಳಗಳನ್ನು ಉರುಳಿಸಿ ಸೈ ಎನಿಸಿಕೊಂಡ ಚಾಣಾಕ್ಷನ ಮುಂದೆ ಮತ್ತದೇ ಚಕ್ರವ್ಯೂಹ. ಆ ಚಕ್ರವ್ಯೂಹದ ಮುಂದೆ ನಿಂತಿರೋ ಡಿಕೆ ಶಿವಕುಮಾರ್(DK Shivakumar), ಜೈಲಿಗೆ ಹಾಕೋದಾದ್ರೆ ಹಾಕ್ಲಿ, ರೆಡಿ ಇದ್ದೇನೆ ನಾನು ಅಂತಿದ್ದಾರೆ. ಡಿಕೆ ಶಿವಕುಮಾರ್ ಅವ್ರನ್ನು ರಾಜಕೀಯದಲ್ಲಿ ಅಂಜದ ಗಂಡು, ಎಂಟೆದೆ ಬಂಟ ಅಂತ ಕರೀತಾರೆ. ಅಂತಹ ಬಹದ್ದೂರ್ ಗಂಡೇ, ಕಂಪಿಸಿದ ಧ್ವನಿಯಲ್ಲಿ ಮಾತನಾಡ್ತಿದ್ದಾರೆ ಅಂದ್ರೆ ಅಲ್ಲೇನೋ ನಡೆದಿರ್ಲೇಬೇಕು.ಡಿಕೆ ಸಾಹೇಬನ ಕೋಟೆಯೊಳಗೆ ಮತ್ತೊಮ್ಮೆ ಬಿರುಗಾಳಿ ಎದ್ದಿದೆ. ಕನಕಪುರದ ಬೇಟೆಗಾರನನ್ನು ಬೇಟೆಯಾಡಲು ಹೊಂಚು ಹಾಕ್ತಿರೋ ಸಿಬಿಐ, ಡಿಕೆಶಿಗೆ ಮತ್ತೆ ಶಾಕ್ ಕೊಟ್ಟಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವ್ರಿಗೆ ಇಡಿ, ಐಟಿ, ಸಿಬಿಐ ಕೇಸ್'ಗಳೆಲ್ಲಾ ಹೊಸನೇತಲ್ಲ. 2017ರಲ್ಲಿ ಶುರುವಾದ ಈ ಕೇಸ್'ಗಳ ಸರಮಾಲೆ, ಬೆನ್ನು ಬಿಡದ ಬೇತಾಳನಂತೆ ಡಿಕೆಶಿಯವ್ರನ್ನ ಕಾಡ್ತಾನೇ ಇವೆ. ಆ ಕೇಸ್"ಗಳ ಕಾರಣದಿಂದ ಡಿಕೆಶಿ, ಅದೆಷ್ಟು ರಾತ್ರಿಗಳನ್ನ ನಿದ್ದೆಯಿಲ್ಲದೆ ಕಳೆದಿದ್ದಾರೋ ಗೊತ್ತಿಲ್ಲ. ಒಂದಾದ ಮೇಲೊಂದರಂತೆ ಕೇಸ್'ಗಳ ಮೇಲೆ ಕೇಸ್.. ಒಮ್ಮೆ ಐಟಿ, ಮತ್ತೊಮ್ಮೆ ಇಡಿ, ಮಗದೊಮ್ಮೆ ಸಿಬಿಐ. ಈ ಕೇಸ್"ಗಳೆಲ್ಲಾ ಡಿಕೆ ಶಿವಕುಮಾರ್ ಅವ್ರನ್ನು ಅದೆಷ್ಟರ ಮಟ್ಟಿಗೆ ಅಲುಗಾಡಿಸಿ ಬಿಟ್ಟಿವೆ ಅಂದ್ರೆ, ಯಾವುದಕ್ಕೂ ಹೆದರಲ್ಲ ಅಂತಿದ್ದ ಡಿಕೆಶಿ 2019ರಲ್ಲಿ ಕಣ್ಣೀರು ಹಾಕ್ತಾ ಜೈಲಿಗೆ ಹೋಗುವಂತಾಗಿತ್ತು.

Add Asianetnews Kannada as a Preferred SourcegooglePreferred

ಇದನ್ನೂ ವೀಕ್ಷಿಸಿ: ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

Related Video