ಜನರಿಗೆ ಮಾತ್ರ ಅಲ್ಲ, ಅಡಿಕೆಗೂ ವೈರಸ್ ಕಾಟ.. ಬೆಳೆಗಾರರ ಬದುಕು ಹೈರಾಣ!

ಅಡಿಕೆ ಬೆಳೆಗಾರರಿಗೆ ಹೊಸ ಆತಂಕ/ ವೈರಸ್ ಕಾಟದಿಂದ ಬದುಕು ಹೈರಾಣ/ ಚಿಕ್ಕಮಗಳೂರು ಜಿಲ್ಲೆಯ ರೈತರ ಗೋಳು ಕೇಳುವವರಿಲ್ಲ/ ಪರಿಹಾರವೇ ಇಲ್ಲದೆ ಕುಳಿತಿದ್ದಾರೆ

Share this Video
  • FB
  • Linkdin
  • Whatsapp

ಚಿಕ್ಕಮಗಳೂರು(ಅ. 08) ಚಿಕ್ಕಮಗಳೂರು ಜಿಲ್ಲೆಯ ಅಡಿಕೆ ಬೆಳಗಾರ ಹೊಸ ರೋಗದಿಂದ ಕಂಗಾಲಾಗಿದ್ದಾರೆ. ಅಡಿಕೆಗೂ ವಿಚಿತ್ರ ವೈರಸ್ ಕಾಟ ಶುರುವಾಗಿದೆ. ವಿಚಿತ್ರ ಕಾಯಿಲೆ ಕೊರೊನಾ ವೈರಸ್ ನಂತೆ ತೋಟದಿಂದ ತೋಟಕ್ಕೆ ಹರಡ್ತಾ ಇರೋದು ಅತಂಕ ತಂದಿದೆ. ಕಳಸ ಸುತ್ತಮುತ್ತ ಅಡಿಕೆಗೆ ವಿಚಿತ್ರ ರೋಗ ಬಂದಿದ್ದು ಸ್ಥಳಕ್ಕೆ ಬಂದ ವಿಜ್ಞಾನಿಗಳನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಡಿಕೆಯಿಂದ ಸಾನಿಟೈಸರ್ ತಯಾರಿಕೆ

ವರುಣ ತಣ್ಣಾಗಾಗಿ ಕೊಂಚ ರಿಲೀಫ್ ಸಿಕ್ತು ಅನ್ನೋವಷ್ಟರಲ್ಲಿ ಕಳಸ ಸುತ್ತಮುತ್ತ ಅಡಿಕೆ ಬೆಳೆದವರಿಗೆ ಮತ್ತೊಂದು ತಲೆನೋವು ಶುರುವಾಗಿದೆ. ವಿಚಿತ್ರ ಕಾಯಿಲೆಯೊಂದು ಅಡಿಕೆಗೆ ಮಾರಕವಾಗ್ತಾ ಇದೆ. ವೈರಸ್ ಅಂತೇ ಹರಡೋಕಾಯಿಲೆಯಿಂದ ಕಂಗೆಟ್ಟು ಹೋಗಿರೋ ರೈತ್ರು ಸ್ಥಳಕ್ಕೆ ಬಂದ ವಿಜ್ಞಾನಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.ಕಣ್ಣಿಗೆ ಕಾಣದ ವೈರಸ್ ಆ ಬೆಳೆಯನ್ನೇ ತಿಂದು ಹಾಕ್ತಿದೆ. ಒಂದು ತುದಿಯಿಂದ ಇಡೀ ಮರಗಳು ಒಣಗುತ್ತಾ ಬರುತ್ತಿವೆ. 

Related Video