
ಬೆಂಗ್ಳೂರಲ್ಲಿ ಕೈತಪ್ಪಿ ಹೋಯ್ತಾ ಕೊರೋನಾ ನಿಯಂತ್ರಣ?
ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ರೂಲ್ಸ್ ಮಾಡುವ ಅಗತ್ಯತೆ ಇದೆ| ಇಲ್ಲವಾದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್| ಬಿಗಿ ಕ್ರಮ ಕೈಗೊಂಡರೆ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ|
ಬೆಂಗಳೂರು(ಏ.18): ನಗರದಲ್ಲಿ ಕೊರೋನಾ ಸಮುದಾಯಕ್ಕೆ ಹಬ್ಬಿದೆ. ನಮಗೂ ಇದರ ಅನುಭವವಾಗಿದೆ. ಬಿಗಿ ಕ್ರಮ ಕೈಗೊಂಡರೆ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ಅಂತ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಕೊರೋನಾ ತಡೆಗೆ ಬೆಂಗಳೂರು ನಗರದಲ್ಲಿ ಮತ್ತಷ್ಟು ಕಠಿಣ ರೂಲ್ಸ್ಗಳನ್ನ ಮಾಡುವ ಅಗತ್ಯತೆ ಇದೆ. ಇಲ್ಲವಾದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ ಎಂದು ಸಚಿವರೇ ಆತಂಕ ವ್ಯಕ್ತಪಡಿಸಿದ್ದಾರೆ.
Add Asianetnews Kannada as a Preferred Source
