Asianet Suvarna News Asianet Suvarna News

ಕರ್ಫ್ಯೂ ಜಾರಿ: ಮನೆಯಿಂದ ಹೊರ ಬರದ ಜನ, ರಾಯಚೂರು ಕಂಪ್ಲೀಟ್‌ ಲಾಕ್‌..!

ರಾಯಚೂರಿನಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಪಾಲನೆ|ಜನರ ಅನವಶ್ಯಕ ಓಡಾಟಕ್ಕೆ ಸಂಪೂರ್ಣ ನಿಷೇಧ|ನಗರದಲ್ಲಿರುವ ಎಲ್ಲ ಅಂಗಡಿ, ಮುಂಗಟ್ಟುಗಳು ಬಂದ್‌|ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಹಾಕಿ ಬಿಗಿ ಪೊಲೀಸ್‌ ಬಂದೋಬಸ್ತ್‌|

ರಾಯಚೂರು(ಮೇ.24): ಇಂದು(ಭಾನುವಾರ) ಬೆಳಿಗ್ಗೆಯಿಂದಲೇ ನಗರದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಪಾಲನೆಯಾಗುತ್ತಿದೆ. ಜನರ ಅನವಶ್ಯಕ ಓಡಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಹೀಗಾಗಿ ಜನರೂ ಕೂಡ ಮನೆ ಬಿಟ್ಟು ಹೊರಗಡೆ ಬರುತ್ತಿಲ್ಲ. ನಗರದಲ್ಲಿರುವ ಎಲ್ಲ ಅಂಗಡಿ, ಮುಂಗಟ್ಟುಗಳು ಬಂದ್‌ ಆಗಿವೆ.

ಲಾಕ್‌ಡೌನ್‌: ಮಂಡ್ಯದಲ್ಲಿ ಅಧಿಕಾರಿಗಳಿಂದಲೇ ಕರ್ಫ್ಯೂ ಉಲ್ಲಂಘಣೆ

ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನ ಹಾಕಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಅಗತ್ಯ ಸೇವೆಗಳಿಗೆ ಮಾತ್ರ ಜಿಲ್ಲಾಡಳಿತ ಅನುಮತಿ ನೀಡಲಾಗಿದೆ. ಹಾಲು, ತರಕಾರಿ, ಮೆಡಿಕಲ್‌ ಶಾಪ್‌ಗಳು ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದೆ. 
 

Video Top Stories