
ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್
ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.
ಬೆಳಗಾವಿ, [ಆ.10]: ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಪ್ರವಾಹದಲ್ಲಿ ಮನೆ-ಮಠ ಕಳೆದುಕೊಂಡಿರುವರಿಗೆ ಶನಿವಾರ ಪರಿಹಾರ ಚೆಕ್ ವಿತರಿಸಿದರು. ಈ ವೇಳೆ ವೃದ್ಧನೋರ್ವ ಅಂಜಲಿಯವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಅಂಜಲಿ, ಧನ್ಯವಾದ ಹೇಳಿದ ವೃದ್ಧನ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಮತ್ತೊಂದೆಡೆ ನೀರಿಲ್ಲದ ಕಡೆ ಬೋಟಿಗೆ ಹುಟ್ಟಾಕಿ ಫೋಟೋಗೆ ಫೋಸ್ ನೀಡಿರೋ ಬಿಜೆಪಿ ಶಾಸಕ ರೇಣುಕಾಚಾರ್ಯ ಸಾಮಾಜಿಕ ಜಾಲತಾಣಗಲ್ಲಿ ಅಪಹಾಸ್ಯಕ್ಕೀಡಾಗಿದ್ದಾರೆ.
Add Asianetnews Kannada as a Preferred Source
