Asianet Suvarna News Asianet Suvarna News

Coronavirus: ಮತ್ತಷ್ಟು ಟಫ್ ರೂಲ್ಸ್ ಸದ್ಯಕ್ಕಿಲ್ಲ, ನಿಯಮ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

* ಕೊರೋನಾ  ಪರಿಸ್ಥಿತಿ ನಿಭಾಯಿಸಲು ಸಭೆ
* ವೀಕೆಂಡ್ ಕರ್ಫ್ಯೂಗೆ ವಿರೋಧದ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ
* ಶುಕ್ರವಾರ ಮತ್ತೊಂದು ಸುತ್ತಿನ ಸಭೆ
* ಆರೋಗ್ಯ ಸಚಿವ ಸುಧಾಕರ್ ಮಾಹಿತಿ

 

ಬೆಂಗಳೂರು(ಜ. 17)  ಕೊರೋನಾ (Coronavirus) ಆತಂಕ ಮತ್ತು ಸದ್ಯದ ಪರಿಸ್ಥಿತಿ  ನಿಯಂತ್ರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai)  ಕರೆದಿದ್ದ ಹೈವೋಲ್ಟೇಜ್ ಮೀಟಿಂಗ್ ಮುಕ್ತಾಯವಾಗಿದ್ದು ಮಹತ್ವದ  ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ

Corinavirus: ಬೊಮ್ಮಾಯಿ ಸಭೆಯ ಪ್ರಮುಖ ನಿರ್ಧಾರಗಳು, ವೀಕೆಂಡ್ ಕರ್ಫ್ಯೂ ಕತೆ ಏನು?

ವೀಕೆಂಡ್ ಕರ್ಫ್ಯೂಗೆ ವಿರೋಧದ ಬಗ್ಗೆ ಶುಕ್ರವಾರ ನಡೆಯುವ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಚಿವ ಸುಧಾಕರ್  ಕಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಬೇಕು. ಆರೋಗ್ಯ ಸ್ಥಿತಿ ಅವಲೋಕಿಸಿ ಜನರಲ್ಲಿ ಆತ್ಮವಿಶ್ವಾಸ ಬೆಳೆಸಬೇಕು. ಔಷಧಿ ಕಿಟ್ ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ.  ಮತ್ತಷ್ಟು ಟಫ್ ರೂಲ್ಸ್ ತರುವ ಆಲೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವ ಅಶೀಕ್ ತಿಳಿಸಿದ್ದಾರೆ.