
CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್ ಇಲ್ಲ: ಸಿಟಿ ರವಿ
ವಾಲ್ಮೀಕಿ ನಿಗಮದ ದುಡ್ಡನ್ನು ರಾಜ್ಯ ಸರ್ಕಾರ ತೆಲಂಗಾಣ ಚುನಾವಣೆಗೆ ಬಳಸಿದಂತೆ ಕಾಣುತ್ತಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.
ನಾಗೇಂದ್ರ(Minister Nagendra) ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ(Siddaramaiah) ಧಮ್ ಇಲ್ಲ. ಧಮ್ ಇದ್ರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ನಾಯಕ ಸಿಟಿ ರವಿ(CT Ravi) ಸವಾಲು ಹಾಕಿದ್ದಾರೆ. ವಾಲ್ಮೀಕಿ ನಿಗಮದ ದುಡ್ಡನ್ನು ತೆಲಂಗಾಣ ಚುನಾವಣೆಗೆ(Telangana elections) ಬಳಸಿರಬೇಕು. ನಾಗೇಂದ್ರ ರಾಜೀನಾಮೆ ಪಡೆಯದಿದ್ದರೇ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.
Add Asianetnews Kannada as a Preferred Source

ಇದನ್ನೂ ವೀಕ್ಷಿಸಿ: ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?