Asianet Suvarna News Asianet Suvarna News

ಕೊರೋನಾ ವಾರಿಯರ್ ಸಾವು: ಪರಿಹಾರಕ್ಕಾಗಿ ಕುಟುಂಬಸ್ಥರ ಆಗ್ರಹ

ನಿನ್ನೆಯಷ್ಟೇ ದಾವಣಗೆರೆ ಜಿಲ್ಲಾಧಿಕಾರಿ ಮಹಂತೇಶ್ ಬೀಳಗಿಯವರ ಕಾಲಿಗೆ ಬಿದ್ದು ಸರಿಯಾದ ಚಿಕಿತ್ಸೆ ಕೊಡಿಸುವಂತೆ ಪೌರ ಕಾರ್ಮಿಕನ ಕುಟುಂಬಸ್ಥರು ಆಗ್ರಹಿಸಿದ್ದರು. ಇದೀಗ ಆ ಪೌರ ಕಾರ್ಮಿಕ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ(ಜು.27): ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗದೇ ಕೊರೋನಾ ವಾರಿಯರ್ ಆದ ಪೌರಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಇದೀಗ ಅವರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪರಿಹಾರಕ್ಕೆ ಆಗ್ರಹಿಸಿ ಧರಣಿ ಕುಳಿತಿದ್ದಾರೆ.

ನಿನ್ನೆಯಷ್ಟೇ ದಾವಣಗೆರೆ ಜಿಲ್ಲಾಧಿಕಾರಿ ಮಹಂತೇಶ್ ಬೀಳಗಿಯವರ ಕಾಲಿಗೆ ಬಿದ್ದು ಸರಿಯಾದ ಚಿಕಿತ್ಸೆ ಕೊಡಿಸುವಂತೆ ಪೌರ ಕಾರ್ಮಿಕನ ಕುಟುಂಬಸ್ಥರು ಆಗ್ರಹಿಸಿದ್ದರು. ಇದೀಗ ಆ ಪೌರ ಕಾರ್ಮಿಕ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ ICMR ಟೆಸ್ಟಿಂಗ್‌ ಲ್ಯಾಬ್‌ನಲ್ಲಿ ಮಹಾ ಯಡವಟ್ಟು..!

ನಮಗೆ ಸರಿಯಾದ ಪರಿಹಾರ ಕೊಡಿ ಎಂದು ಡಿಸಿ ಕಚೇರಿ ಮುಂದೆ ನಿಂತು ಆಗ್ರಹಿಸಿದ್ದಾರೆ. ಈ ವೇಳೆ ಪೌರ ಕಾರ್ಮಿಕನ ಅಕ್ಕ ಪುಷ್ಪಾ ಅಸ್ವಸ್ಥರಾದ ಘಟನೆಯೂ ನಡೆಯಿತು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories