
Ukraine Return: ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ, ಗ್ರಾಮಸ್ಥರಿಂದ ವಿರೋಧ!
ಉಕ್ರೇನ್ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿರುವ ಘಟನೆ ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ.ಈ ನಡೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.
ದಾವಣಗೆರೆ (ಮಾ. 10): ಉಕ್ರೇನ್ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿರುವ ಘಟನೆ ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಸೊಕ್ಕೆ ಗ್ರಾಮದ ಯುವಕ ಆದರ್ಶ್ ಉಕ್ರೇನ್ನಲ್ಲಿ ಮೆಡಿಕಲ್ ಓದುತ್ತಿದ್ದರು. ಅವರು ಉಕ್ರೇನ್ನಿಂದ ಸುರಕ್ಷಿತವಾಗಿ ಇಂದು ಗ್ರಾಮಕ್ಕೆ ಮರಳಿದ್ದಾರೆ. ಬಿಜೆಪಿ ಬೆಂಬಲಿತ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿ ಬಿಜೆಪಿ ಬಾವುಟ ಹಿಡಿದು ಸ್ವಾಗತಿಸಿದ್ದಾರೆ. ಈ ನಡೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.
Add Asianetnews Kannada as a Preferred Source
