ಕನ್ನಡಿಗರಿಗೆ ಮಹಾರಾಷ್ಟ್ರ ತೊಂದ್ರೆ ಕೊಟ್ರೆ ಸಹಿಸಲ್ಲ ಡಿಸಿಎಂ ಲಕ್ಷ್ಮಣ ಸವದಿ
ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರಿಂದ ಗಡಿಯಲ್ಲಿ ಉದ್ಧಟತನ| ಗಡಿಯಲ್ಲಿ ಮಹಾರಾಷ್ಟ್ರ ತೊಂದರೆ ಕೊಟ್ಟರೆ ಸಹಿಸಲ್ಲ ಎಂದ ಲಕ್ಷ್ಮಣ ಸವದಿ| ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅನಾವಶ್ಯಕವಾಗಿ ವಿವಾದವನ್ನು ಸೃಷ್ಟಿಸುತ್ತಿದ್ದಾರೆ|
ಬೆಂಗಳೂರು(ಜ.01): ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರಿಂದ ಗಡಿಯಲ್ಲಿ ಉದ್ಧಟತನ ಮಾಡುತ್ತಿದೆ. ಗಡಿಯಲ್ಲಿ ಮಹಾರಾಷ್ಟ್ರ ತೊಂದರೆ ಕೊಟ್ಟರೆ ಸಹಿಸೋದು ಆಗೋದಿಲ್ಲ ಎಂದು ಹೇಳುವ ಮೂಲಕ ಮಹಾರಾಷ್ಟ್ರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅನಾವಶ್ಯಕವಾಗಿ ವಿವಾದವನ್ನು ಸೃಷ್ಟಿಸುತ್ತಿದ್ದಾರೆ. ಠಾಕ್ರೆ ಸಂಬಂಧಿ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ ಬಗ್ಗೆ ಏನು ಹೇಳಿಕೆ ಕೊಟ್ಟಿದ್ದಾರೆ ಎಂಬುದನ್ನು ಮೊದಲು ನೆನೆಪಿಸಿಕೊಂಡ್ರೆ ಅವರಿಗೆ ಒಳ್ಳೆಯದಾಗುತ್ತದೆ. ಅನಾವಶ್ಯಕವಾಗಿ ಗೊಂದಲ ಉಂಟುಮಾಡುವಂತ ಹೇಳಿಕೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗುವಂತೆ ಹೇಳಿಕೆಗಳನ್ನಿ ನೀಡೋದನ್ನ ನಿಲ್ಲಿಸಬೇಕು ಎಂದು ಹೇಳಿದ್ದಾರೆ.