
DCM ರದ್ದು: ರೇಣುಕಾಚಾರ್ಯಗೆ ಲಕ್ಷ್ಮಣ ಸವದಿ ಗುದ್ದು !
ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರ| ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ| ರೇಣುಕಾಚಾರ್ಯಗೆ ತಿರುಗೇಟು ನೀಡಿದ ಸವದಿ| ರೇಣುಕಾಚಾರ್ಯ ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ| ಈ ಬಗ್ಗೆ ನಾನು ಮಾತಾಡಲ್ಲ|
ಬೆಂಗಳೂರು(ಜ.01): ಉಪಮುಖ್ಯಮಂತ್ರಿ ಹುದ್ದೆ ರದ್ದು ವಿಚಾರವನ್ನ ಹಾದಿ ಬೀದಿಯಲ್ಲಿ ನಾನೂ ಚರ್ಚೆ ಮಾಡೋದಿಲ್ಲ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ ಅವರು ಸಹಿ ಸಂಗ್ರಹ ಮಾಡುತ್ತಿರುವ ವಿಚಾರ ನನಗೆ ಗೊತ್ತಿಲ್ಲ, ಈ ಬಗ್ಗೆ ನಾನು ಮಾತಾಡಲ್ಲ, ಕಾಲ ಕೂಡಿ ಬಂದಾಗ ವಿಧಾನ ಪರಿಷತ್ತಿಗೆ ಪ್ರವೇಶ ಆಗತ್ತದೆ ಎಂದು ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಡಿಸಿಎಂ ಸ್ಥಾನಕ್ಕೆ ಕತ್ತರಿ ಹಾಕಿ ಎಂದಿದ್ದ ಶಾಸಕ ರೇಣುಕಾಚಾರ್ಯ ಈಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ ಡಿಸಿಎಂ ಕಿತ್ತಾಕಲು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ.