
ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ಸಿಎಎ ವಿರೋಧಿ ಧ್ವನಿ!
ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ.
ಕಲಬುರಗಿ(ಫೆ.07): ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ. ಗುಲಬರ್ಗಾ ವಿವಿ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಕವಿಗೋಷ್ಠಿಯಲ್ಲಿ "ಕಿರುತೆರೆ –ಸಾಮಾಜಿಕ ಜವಾಬ್ದಾರಿಗಳು" ವಿಷಯ ಮಂಡಿಸುವುದಕ್ಕಿಂತ ಮುನ್ನ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಸುರೇಶ್ ತಮ್ಮ ಅಭಿಪ್ರಾಯ ಹೊರಹಾಕಿದರು.
Add Asianetnews Kannada as a Preferred Source
