Asianet Suvarna News Asianet Suvarna News

ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ಸಿಎಎ ವಿರೋಧಿ ಧ್ವನಿ!

ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ. 

ಕಲಬುರಗಿ(ಫೆ.07): ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ. ಗುಲಬರ್ಗಾ ವಿವಿ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಕವಿಗೋಷ್ಠಿಯಲ್ಲಿ "ಕಿರುತೆರೆ –ಸಾಮಾಜಿಕ ಜವಾಬ್ದಾರಿಗಳು" ವಿಷಯ ಮಂಡಿಸುವುದಕ್ಕಿಂತ ಮುನ್ನ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಸುರೇಶ್ ತಮ್ಮ ಅಭಿಪ್ರಾಯ ಹೊರಹಾಕಿದರು.