ಉತ್ತರ ಕರ್ನಾಟಕದಲ್ಲಿ ಪ್ರವಾಹ: ಸಚಿವ ಜಾರಕಿಹೊಳಿ ಕ್ಷೇತ್ರಕ್ಕೆ ಡಿಕೆಶಿ ಲಗ್ಗೆ
ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಲಿರುವ ಡಿ.ಕೆ. ಶಿವಕುಮಾರ್| ಆ. 24ರಂದು ಜಿಲ್ಲೆಗೆ ಭೇಟಿ ನೀಡಲಿರುವ ಡಿಕೆಶಿ| ಸಿಎಂ ಆಗಮಿಸುವ ಮೊದಲು ಜಿಲ್ಲೆಗೆ ಆಗಮಿಸಲಿರುವ ಡಿಕೆಶಿ|
ಬೆಳಗಾವಿ(ಆ.22): ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆ. 24ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕ್ಷೇತ್ರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನ ಪರಿಶೀಲನೆ ನಡೆಸಲಿದ್ದಾರೆ.
ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್ ಪ್ರಯಾಣ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನ ಪರಿಶೀಲನೆ ನಡೆಸಲು ಆ. 25 ರಂದು ಆಗಮಿಸಲಿದ್ದಾರೆ. ಆದರೆ, ಡಿಕೆಶಿ ಸಿಎಂ ಆಗಮಿಸುವ ಮೊದಲು ಜಿಲ್ಲೆಗೆ ಆಗಮಿಸಲಿದ್ದಾರೆ.