Asianet Suvarna News Asianet Suvarna News

ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

ಸುರಿಯುತ್ತಿದ್ದ ಮಳೆಯ ನಡುವೆಯೇ ಅನಾಥವಾಗಿ ಬಿದ್ದಿದ್ದ ಮೃತದೇಹ| ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದ ಘಟನೆ|ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿರುವ ಆರೋಗ್ಯಾಧಿಕಾರಿಗಳು|ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ|

ಬಳ್ಳಾರಿ(ಜು.02): ಮಹಾಮಾರಿ ಕೊರೋನಾದಿಂದ ಸಾವನ್ನಪ್ಪಿದ್ದ ಶವಗಳ ಅಮಾನವೀಯ ಸಂಸ್ಕಾರದ ಬೆನ್ನಲ್ಲೇ ಮತ್ತೊ೦ದು ಅಂತಹುದೆ ಘಟನೆಯೊಂದು ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಹೌದು, ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸುರಿಯುತ್ತಿದ್ದ ಮಳೆಯ ನಡುವೆಯೇ ಮೃತದೇಹವೊಂದು ಅನಾಥವಾಗಿ ಬಿದ್ದ ಘಟನೆ ನಡೆದಿದೆ.

ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

ಮೂರು ದಿನಗಳ ಹಿಂದೆ ಘಟನೆ ನಡೆದಿದೆ. ಈ ಘಟನೆಯ ಮೂಲಕ ಬಳ್ಳಾರಿ ಜಿಲ್ಲೆಯ ಆರೋಗ್ಯಾಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 
 

Video Top Stories