Asianet Suvarna News Asianet Suvarna News

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರ(ಜ.26): ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರದ ಗಣರಾಜ್ಯೋತ್ಸವದ ಆಚರಣೆ ವೇಳೆ ನಾಯಿ ಮರಿ ಪಥಸಂಚಲನದಲ್ಲಿ ಭಾಗವಹಿಸಿದ್ದು, ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಘಟನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ನಾಗೇಶ್ ಅವರಿಗೆ ಪಥ ಸಂಚಲನದ ಮೂಲಕ ಗೌರವ ಸಲ್ಲಿಸಿದ ನಾಯಿ ಮರಿ ಗೃಹರಕ್ಷಕ ದಳ ತಂಡದೊಂದಿಗೆ ಬೀದಿ ನಾಯಿ ಮರಿಯೂ ಆಗಮಿಸಿತ್ತು.

ನೃತ್ಯ ಅಭ್ಯಾಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪಥಸಂಚಲನ ಮಾಡಿದ ನಾಯಿ ಮರಿ ಆಕರ್ಷಣೆಯ ಕೆಂದ್ರಬಿಂದುವಾಗಿತ್ತು. ಕೋಲಾರದಲ್ಲಿ 71 ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆದಿದ್ದು, ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆದಿದೆ. ಧ್ವಜಾರೋಹಣ ನೆರವೇರಿಸಿ ಸಚಿವ ಎಚ್.ನಾಗೇಶ್ ಗೌರವವಂದನೆ ಸ್ವೀಕರಿಸಿದ್ದಾರೆ. ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾಧಿಕಾರಿ ಜಿ.ಮಂಜುನಾಥ್ ಭಾಗಿಯಾಗಿದ್ದರು.

2020 ರ ಕ್ಯಾಲೆಂಡರ್‌ನಲ್ಲಿ ಕಂಗೊಳಿಸುತ್ತಿದ್ದಾರೆ ಕನ್ನಡದ 'ಕ್ವೀನ್ಸ್'

Video Top Stories